×

ಹಿರಿಯೂರು: ನೂತನ ಬಸ್ ಘಟಕ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನಲ್ಲಿ ಬಹುದಿನಗಳ ಸಾರ್ವಜನಿಕರ ಬೇಡಿಕೆ ಈಡೇರಿದ್ದು, ನೂತನ ಬಸ್ ಘಟಕವನ್ನು ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವ ಡಿ.ಸುಧಾಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

3 ಎಕರೆ ವಿಸ್ತೀರ್ಣದಲ್ಲಿ ಸುಮಾರು ರೂ. 600 ಲಕ್ಷ ವೆಚ್ಚದಲ್ಲಿ ನಿರ್ಮಿತ ಈ ಘಟಕದಲ್ಲಿ ಪ್ರಾರಂಭದಲ್ಲಿ 25 ಅನುಸೂಚಿ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗುತ್ತಿದೆ. ಘಟಕದಲ್ಲಿ ಬಸ್ಸುಗಳ ನಿರ್ವಹಣಾ ಅಂಕಣ, ಪರಿವೀಕ್ಷಣಾ ಅಂಕಣ, ಭದ್ರತಾ ಹಾಗೂ ಸಂಚಾರ ಶಾಖೆ, ಮಹಿಳಾ ಮತ್ತು ಪುರುಷರ ವಿಶ್ರಾಂತಿ ಗೃಹ, ಶೌಚಾಲಯ, ಇಂಧನ ಕೊಠಡಿ, ವಾಷಿಂಗ್ ರಾಂಪ್, ಪಾರ್ಕಿಂಗ್ ವ್ಯವಸ್ಥೆ ಮತ್ತು ಜನರೇಟರ್ ಕೊಠಡಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

%voice of karnataka % top kannada news

ಸಾರಿಗೆ ಸಚಿವರು ಈ ಸಂದರ್ಭದಲ್ಲಿ ಹಿರಿಯೂರು-ಧರ್ಮಸ್ಥಳ, ಹಿರಿಯೂರು-ಚಳ್ಳಕೆರೆ, ಹಿರಿಯೂರು-ಹೊಸದುರ್ಗ, ಹಿರಿಯೂರು-ಹಾಸನ ಹಾಗೂ ಹಿರಿಯೂರು-ಧರ್ಮಪುರ ಮಾರ್ಗದ ನೂತನ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

ಹಿರಿಯೂರು ಬಸ್ ನಿಲ್ದಾಣ ಹಳೆಯದಾಗಿ ಇರುವುದರಿಂದ ಅದನ್ನು ಉನ್ನತೀಕರಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇದೇ ವೇಳೆ, ಧರ್ಮಪುರದಲ್ಲಿ ರೂ. 3.5 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಬೇಡಿಕೆಯನ್ನು ಶೀಘ್ರ ಮಂಜೂರು ಮಾಡುವುದಾಗಿ ಘೋಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮಂಡಳಿಯ ಸದಸ್ಯ ಕೆ.ಎಸ್.ನವೀನ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೀಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ್, ನಗರಸಭೆ ಹಿರಿಯೂರು ಅಧ್ಯಕ್ಷ ಬಾಲಕೃಷ್ಣ ಆರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಣ್ಣ ಆರ್ ಸೇರಿದಂತೆ ಗಣ್ಯರು ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed