ಬಿಜೆಪಿ ಅವಧಿಯಲ್ಲಿ ದೇವಸ್ಥಾನಗಳ ಸೇವಾಶುಲ್ಕ ಹೆಚ್ಚಳದ ಪಟ್ಟಿ ಬಿಡುಗಡೆ
ಬೆಂಗಳೂರು:
‘ಧರ್ಮರಕ್ಷಕ’ ಎನ್ನುವ ಮುಖವಾಡ ತೊಟ್ಟು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿ ನಾಯಕರ ಬೌದ್ಧಿಕ ಅಧಃಪತನ ಈಗ ಬಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2019ರಿಂದ 2023ರವರೆಗೆ ಬಿಜೆಪಿ ಸರ್ಕಾರವೇ 24ಕ್ಕೂ ಹೆಚ್ಚು ದೇವಾಲಯಗಳಲ್ಲಿ ಪೂಜಾ ಸೇವಾಶುಲ್ಕವನ್ನು ಹೆಚ್ಚಿಸಿತ್ತು. ಧರ್ಮರಕ್ಷಣೆಗಾಗಿ ಬಂದ ಸರ್ಕಾರವೇ ಇಂತಹ ನಿರ್ಧಾರ ಕೈಗೊಂಡಿರುವುದು ಜನರಲ್ಲಿ ಗೊಂದಲ ಸೃಷ್ಟಿಸುವಂತದ್ದಾಗಿದೆ ಎಂದು ಅವರು ಹೇಳಿದರು.
ಆದರೆ, ವಾಸ್ತವದಲ್ಲಿ ರಾಜ್ಯದ 35,554 ದೇವಸ್ಥಾನಗಳ ಪೈಕಿ ಕೇವಲ 14 ದೇವಸ್ಥಾನಗಳಲ್ಲಷ್ಟೇ ಸೇವಾಶುಲ್ಕ ಹೆಚ್ಚಳವಾಗಿದೆ. ಅದು ಕೂಡ ಸಂಬಂಧಪಟ್ಟ ದೇವಸ್ಥಾನಗಳ ಆಡಳಿತ ಮಂಡಳಿಗಳ ಕೋರಿಕೆಯ ಮೇರೆಗೆ, 7ರಿಂದ 15 ವರ್ಷಗಳ ನಂತರ ಸೇವಾಶುಲ್ಕ ಪರಿಷ್ಕರಣೆಗೊಳಪಟ್ಟಿದೆ. ಸಂಗ್ರಹವಾಗುವ ಹಣವನ್ನು ದೇವಸ್ಥಾನಗಳ ನಿರ್ವಹಣೆ ಮತ್ತು ಅಭಿವೃದ್ಧಿಗೆ ಮಾತ್ರ ಬಳಸಲಾಗುತ್ತಿದೆ. ಇಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರು ಸದಾ ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ. ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಬಿಟ್ಟು, ಈಗಾದರೂ ತಮ್ಮ ಮುಖವಾಡವನ್ನು ಕಳಚಬೇಕಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದರು.
ಧರ್ಮ ರಕ್ಷಣೆಗಾಗಿಯೇ ಅಧಿಕಾರಕ್ಕೆ ಬಂದವರು ನಾವು ಎನ್ನುವ ‘ನಕಲಿ ಧರ್ಮರಕ್ಷಕ’ ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ ಮಾಡಿದ್ದರು. ಇದು ಧರ್ಮ ವಿರೋಧಿ ನಡೆಯೇ ? ಇದರ ಪಟ್ಟಿ ಇಲ್ಲಿದೆ.
1. ಶ್ರೀ ವೀರಭದ್ರ ಸ್ವಾಮಿ ದೇವಾಲಯ, ನೆಲಮಂಗಲ ತಾಲ್ಲೂಕು
2. ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ, ಕವೂರು
3. ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ, ದರೂರು ಗ್ರಾಮ, ಸಿರುಗುಪ್ಪ ತಾಲ್ಲೂಕು, ಬಳ್ಳಾರಿ
4. ಶ್ರೀ ಮೈಲಾರಲಿಂಗಸ್ವಾಮಿ ದೇವಾಲಯ, ಹೂವಿನಹಡಗಲಿ ತಾಲ್ಲೂಕು, ಬಳ್ಳಾರಿ
5. ಶ್ರೀ ಹೊಸೂರಮ್ಮ ದೇವಾಲಯ, ಹೊಸಪೇಟೆ ತಾಲ್ಲೂಕು, ಬಳ್ಳಾರಿ
6. ಶ್ರೀ ವಿಶ್ವೇಶ್ವರಸ್ವಾಮಿ ದೇವಾಲಯ, ಎಲ್ಲೂರು, ಕಾಪು ತಾಲ್ಲೂಕು, ಉಡುಪಿ
7. ಶ್ರೀಬೋಳರಾಮೇಶ್ವರಸ್ವಾಮಿ ದೇವಾಲಯ, ಚಿಕ್ಕಮಗಳೂರು ನಗರ
8. ಶ್ರೀ ಕೋಟಿಲಿಂಗೇಶ್ವರಸ್ವಾಮಿ ದೇವಾಲಯ, ಕುಂದಾಪುರ ತಾಲ್ಲೂಕು, ಉಡುಪಿ
9. ಶ್ರೀ ನಾಗೇಶ್ವರಸ್ವಾಮಿ ದೇವಾಲಯ, ಚನ್ನರಾಯಪಟ್ಟಣ, ಹಾಸನ
10. ಶ್ರೀ ಮಹಿಷಮರ್ಧಿನಿ ದೇವಾಲಯ, ಕಡಿಯಾಳಿ, ಉಡುಪಿ
11. ತಿಪಟೂರು ಕಿಬ್ಬನಹಳ್ಳಿ ರಜತಾದ್ರಿಪುರ ಹತ್ಯಾಳು ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾದೇವಾಲ. ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯ, ಕುಣಿಗಲ್ ತಾಲ್ಲೂಕು, ತುಮಕೂರು
12. ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯ, ಕುಣಿಗಲ್ ತಾಲ್ಲೂಕು, ತುಮಕೂರು
13. ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕು, ನಾಗಲಮಡಿಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯ
14. ಮೈಸೂರು ಜಿಲ್ಲೆ ನಂಜನಗೂಡು ತಾ. ಚಿಕ್ಕಯ್ಯನ ಛತ್ರದಲ್ಲಿರುವ ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಾಲಯ
15. ದ.ಕ. ಜಿಲ್ಲೆರವರ ಕೋರಿಕೆಯಂತೆ, ಕುತ್ಯಾರು ಶ್ರೀ ಸೋಮನಾಥೇಶ್ವರ ದೇ. ಬೆಳ್ತಂಗಡಿ
16. ಕನಕಪುರ ತಾಲ್ಲೂಕು ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಶ್ರೀ ಕಬ್ಬಾಳಮ್ಮ ದೇವಾಲಯ
17. ಬೆಂಗಳೂರು ನಗರ ಸಂಪಂಗಿರಾಮನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ ಮತ್ತು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ
18. ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕು, ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ
19. ಶ್ರೀ ಅಮೃತೇಶ್ವರಸ್ವಾಮಿ ದೇವಾಲಯ, ಬ್ರಹ್ಮಾವರ ತಾಲ್ಲೂಕು, ಉಡುಪಿ
20. ಶ್ರೀ ದೊಡ್ಡಗಣಪತಿ ಮತ್ತು ಸಮೂಹ ದೇವಾಲಯಗಳು, ಬಸವನಗುಡಿ, ಬೆಂಗಳೂರು.
21. ಶ್ರೀ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯ, ಅಂತರಗಂಗೆ, ಕೋಲಾರ
22. ಚನ್ನಪಟ್ಟಣ ತಾಲ್ಲೂಕು, ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಾಲಯ
23. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಎಡೆಯೂರು ಗ್ರಾಮದ ಶ್ರೀಶ್ರೀಸಿದ್ದಲಿಂಗೇಶ್ವರ ದೇವಾಲಯ
24. ಬೆಂಗಳೂರು ನಗರ ಜಿಲ್ಲೆ ಹನುಮಂತನಗರ ಶ್ರೀ ಕುಮಾರಸ್ವಾಮಿ ದೇವಾಲಯ ಶ್ರೀ ಪಂಚಮುಖಿ ಸನ್ನಿಧಿ ಮತ್ತು ಶ್ರೀ ಉದ್ಭವ ಆಧಿಶೇಷ ಸನ್ನಿಧಿ.
ಜನರ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳಬೇಡಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದು ನಿಲ್ಲಿಸಿ. ದೇವರು ಇವರಿಗೆ ಸದ್ಬುದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
Post Comment