×

“ಸಾರಿಗೆ ಇಲಾಖೆಯಲ್ಲಿ ಬಿಜೆಪಿ ಸರಕಾರ ಮಾಡಿದ್ದ 5,900 ಕೋಟಿ‌ ರೂ. ನಷ್ಟವನ್ನು ತುಂಬುತ್ತಿದ್ದೇವೆ”

ಬೆಂಗಳೂರು: ಬಿಜೆಪಿ ಕರ್ನಾಟಕ ಅವರೇ ನಿಮಗೆ ಸ್ವಲ್ಪವೂ ಕೂಡ ಅಂಜಿಕೆ, ಅಳುಕು‌ ಇಲ್ಲವೇ.. ಮನುಷ್ಯರಾದವರಿಗೆ ಯಾವುದೇ ಒಂದು‌ ಕ್ಷಣದಲ್ಲಾದರೂ ಯಾವುದಾದರೂ ಒಂದು ಸಂದರ್ಭದಲ್ಲಿಯಾದರೂ ತಮ್ಮ‌ ತಪ್ಪಿನ ಅರಿವಾಗಬೇಕು. ಪಾಪ ಪ್ರಜ್ಞೆ ಕಾಡಬೇಕು ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

ಇದ್ಯಾವುದೂ ಇಲ್ಲದೆ ಹೀಗೆ ಸುಖಾಸುಮ್ಮನೆ ದಿನಂಪ್ರತಿ ಸುಳ್ಳುಗಳನ್ನೇ ನಿಜವೆಂದು ಬಿಂಬಿಸುವಂತೆ ಟ್ಟೀಟ್ ಮಾಡಿ ಏನನ್ನು ಬಿಂಬಿಸಲು ಹೊರಟ್ಟಿದ್ದೀರಾ? ತಮ್ಮ ಬಿ.ಜೆ.ಪಿ. ಸರ್ಕಾರವು ಬಿಟ್ಟು ಹೋಗಿದ್ದ ₹5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ, ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸ ಬೇಕಾಗಿದೆ. ಕೋವಿಡ್ ಸಮಯದಲ್ಲಿ ಬಸ್ಸುಗಳ ಕಾರ್ಯಾಚರಣೆ ಆಗದೆ ತಮ್ಮ ಸರ್ಕಾರ ಸಾರಿಗೆ ಸಿಬ್ಬಂದಿಗಳಿಗೆ ಸಂಬಳ ಮಾತ್ರ ನೀಡಿ, ಭವಿಷ್ಯ ‌ನಿಧಿ, ಎಲ್‌ಐಸಿ, ಸೊಸೈಟಿ ಹಾಗೂ ಇತರೆ ಯಾವುದೇ ಕಡಿತಗಳ ಹಣವನ್ನು ಸಾರಿಗೆ ನಿಗಮಗಳಿಗೆ ಪಾವತಿ ಮಾಡಿರುವುದಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ.

ನಮ್ಮ ಸರ್ಕಾರದ ಕೊನೆಯಲ್ಲಿ ಅಂದರೆ ಮೇ 2018ರ ಅಂತ್ಯಕ್ಕೆ ಸಾರಿಗೆ ನಿಗಮಗಳಲ್ಲಿ ಭವಿಷ್ಯ ನಿಧಿ ಮೊತ್ತ ಬಾಕಿ ಇದ್ದದ್ದು ರೂ ( ಕೋಟಿಗಳಲ್ಲಿ )
KSRTC – ₹೦.೦೦
BMTC – ₹೦.೦೦
NWKRTC – ₹13.71
KKRTC – ೦.೦೦ ಅದೇ 2023ರ ಮೇ ಅಂತ್ಯಕ್ಕೆ ತಮ್ಮ ಸರ್ಕಾರ ಸಾರಿಗೆ ನಿಗಮಗಳಲ್ಲಿ ಬಾಕಿ ಇಟ್ಟು ಹೋಗಿದ್ದ ಭವಿಷ್ಯ ನಿಧಿ ಮೊತ್ತ ರೂ ( ಕೋಟಿಗಳಲ್ಲಿ)
KSRTC – ₹659.57
BMTC – ₹111.47
NWKRTC – ₹609.55
KKRTC – ₹0.00
(Total ₹1380. 59 ಕೋಟಿ ಭವಿಷ್ಯ ನಿಧಿ ಮಾತ್ರ ಬಾಕಿ ). ತಮ್ಮ‌ ಕಾಲದಲ್ಲಿ ಸಾರಿಗೆ ಸಿಬ್ಬಂದಿಗಳಿಗೆ 2020 ಜನವರಿಯಲ್ಲಿ ಮಾಡಬೇಕಿದ್ದ ಸಂಬಳವನ್ನು ಏರಿಕೆ ಮಾಡದೆ, 15 ದಿನಗಳ ಕಾಲ ಯಶಸ್ವಿ ಸಾರಿಗೆ ಮುಷ್ಕರ ಮಾಡಿಸಿ, ರಾಜ್ಯದ ಜನ ಬಸ್ ಸಂಚಾರ ಇಲ್ಲದೆ ಕಷ್ಟಪಟ್ಟಿದ್ದು ತಮ್ಮ ಸಾಧನೆಯೇ? ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.

2023 ಮಾರ್ಚ್ ನಲ್ಲಿ ಸಂಬಳ ಹೆಚ್ಚಳ ಮಾಡಿದ್ದೀರಾ ಅಂದರೆ ಬರೋಬರಿ 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಕೆ ಬೇಕಾದ ಅನುದಾನವನ್ನು ನೀಡದೆ ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿ ಹೋಗಿರುವ ನಿಮಗೆ ಯಾವ ನೈತಿಕತೆ ಇದೆ? ನಾವು ಎಂದು ಸಾರಿಗೆ ಸಂಸ್ಥೆಗಳು ಲಾಭದಲ್ಲಿವೆ ಎಂದು ಹೇಳಿಲ್ಲ ಆದಾಯ ವೃದ್ದಿಯಾಗಿದೆ ಎಂದಷ್ಟೇ ಹೇಳಿರುವುದು. ಬಿ.ಜೆ.ಪಿ ಅವರಿಗೆ ಲಾಭ/ ನಷ್ಟ, ಆದಾಯ / ವೆಚ್ಚ ಇದ್ಯಾವುದರ ಬಗ್ಗೆ ಜ್ಞಾನವೇ ಇಲ್ಲದಿರುವಾಗ, ನಿಮಗೆ ನಾವು ಲೆಕ್ಕಪತ್ರ ಪಾಠ ಮಾಡಲು ಸಾಧ್ಯವೇ? ಎಂದು ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Previous post

ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ: ಸಿ‌.ಎಂ.ಸಿದ್ದರಾಮಯ್ಯ ಪ್ರಶ್ನೆ

Next post

ಸೂಪರ್‌ಸ್ಟಾರ್‌ ಅಲ್ಲು ಅರ್ಜುನ್‌ನನ್ನು ಭೇಟಿಯಾಗಲು ಇಲ್ಲಿದೆ ಸುವರ್ಣಾವಕಾಶ!

Post Comment

You May Have Missed