×

ರಾಜ್ಯಕ್ಕೆ ಮಹಾರಾಷ್ಟ್ರದ ಸಾರಿಗೆ ಸಚಿವರ ತಂಡ ಭೇಟಿ

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್‌ ಸರ್‌ನಾಯಕ್‌, ಮಾಧವ್ ಕುಸೆಕರ್ ಭಾಆಸೇ, ಎಂ.ಎಸ್.ಆರ್.ಟಿ.ಸಿ ಉಪಾಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ತಂಡವು ಕರಾರಸಾ ನಿಗಮದ, ಘಟಕ,‌ ಕಾರ್ಯಾಗಾರ ಹಾಗೂ ಕೇಂದ್ರ ಕಛೇರಿಗೆ ಭೇಟಿ ನೀಡಿದರು.

%voice of karnataka % top kannada news

ಈ ಸಂದರ್ಭದಲ್ಲಿ ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, ಕೆ.ಎಸ್.ಆರ್.ಟಿ.ಸಿ. ಆರೋಗ್ಯ, ರೂ 1 ಕೋಟಿ ಅಪಘಾತ ವಿಮೆ, ಇತರೆ ಉಪಕ್ರಮಗಳ ಬಗ್ಗೆ ಸಚಿವರಾದ ರಾಮಲಿಂಗಾ ರೆಡ್ಡಿ, ರಿಜ್ವಾನ್ ನವಾಬ್ ಮಾನ್ಯ ಉಪಾಧ್ಯಕ್ಷರು, ಕರಾರಸಾ. ನಿಗಮ., ಸರ್ಕಾರದ ಕಾರ್ಯದರ್ಶಿಗಳು, ಸಾರಿಗೆ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರೊಂದಿಗೆ ವಿವರವಾಗಿ ಚರ್ಚಿಸಿ ಮಾಹಿತಿ ಪಡೆದುಕೊಂಡರು.

%voice of karnataka % top kannada news

ಅಲ್ಲದೆ, ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ತಂಡವು ಐರಾವತ ಕ್ಲಬ್ ಕಾಸ್, ಐರಾವತ ಕ್ಲಬ್ ಕಾಸ್ 2.0, ಅಂಬಾರಿ ಡ್ರೀಮ್ ಕ್ಲಾಸ್, ಪಲ್ಲಕ್ಕಿ, ಅಂಬಾರಿ ಉತ್ಸವ, ಫ್ಲೈ ಬಸ್, ನಗರ ಸಾರಿಗೆ, ರಾಜಹಂಸ ಹಾಗೂ ಅಶ್ವಮೇಧ ವಾಹನಗಳನ್ನು ವೀಕ್ಷಿಸಿದರು. ಘಟಕ ಹಾಗೂ ಕಾರ್ಯಾಗಾರ ನಿರ್ವಹಣೆ, ವಾಹನಗಳಿಗೆ ನೀಡಿರುವ ಬ್ರಾಂಡಿಗ್ ಹಾಗೂ ವಾಹನಗಳ ಪುನಶ್ಚೇತನ ಕಾರ್ಯ ಹಾಗೂ ಹಲವು ಉಪಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

%voice of karnataka % top kannada news
%voice of karnataka % top kannada news
%voice of karnataka % top kannada news

ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಬೆಂ.ಮ.ಸಾ. ಸಂಸ್ಥೆ, ಹಾಗೂ ನಿರ್ದೇಶಕರು (ಸಿ ಮತ್ತು ಜಾ), ಅಪರ ಸಾರಿಗೆ ಆಯುಕ್ತರು, (ಪ್ರವರ್ತನ) (ದಕ್ಷಿಣ), ಹಾಗೂ ಎಂ.ಎಸ್.ಆರ್.ಟಿ.ಸಿ. ತಾಂತ್ರಿಕ, ಸಂಚಾರ ಹಾಗೂ ಕಾಮಗಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಕರಾರಸಾ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

%voice of karnataka % top kannada news
%voice of karnataka % top kannada news

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed