×

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮತ್ತೆ 3 ರಾಷ್ಟ್ರೀಯ ಪ್ರಶಸ್ತಿಗಳು

ನವದೆಹಲಿ: ರಾಜ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳಲ್ಲಿ (National Transport Excellence Award) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮತ್ತೆ 3 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳನ್ನು ಒಳಗೊಂಡಿರುವ ASRTU, 1965ರಿಂದಲೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ.

ಕೆಎಸ್ಆರ್ಟಿಸಿಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಈ ಮೂರು ಪ್ರಶಸ್ತಿಗಳು ಲಭಿಸಿವೆ. ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ಕಿರಣ್ ಬೇಡಿ IPS (ನಿವೃತ್ತ) ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಪ್ರಿಯಾಂಗ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಸೂರ್ಯಕಿರಣ್, ನಿರ್ವಾಹಕ ನಿರ್ದೇಶಕರು, ASRTU, ಉಪಸ್ಥಿತರಿದ್ದರು. ಕೆಎಸ್ಆರ್ಟಿಸಿಯ ಪರವಾಗಿ ಗುರುರಾಜ ಹೆಚ್, ಉಪಮುಖ್ಯ ಸಂಚಾರ ವ್ಯವಸ್ಥಾಪಕರು, ಮತ್ತು ರಾಧ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಸಾರಿಗೆ ಸಂಸ್ಥೆಯಲ್ಲಿ 26 ವರ್ಷಗಳ ಸೇವೆ ಸಲ್ಲಿಸಿದ ಸುಲೋಚನಾ ದೇವಿ, ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕ, ಅವರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕೆಎಸ್ಆರ್ಟಿಸಿಯ ಈ ಸಾಧನೆ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed