×

ಅಂಜನಾಪುರದಲ್ಲಿ ಹೊಸ RTO ಕಛೇರಿ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಅಂಜನಾಪುರದಲ್ಲಿ ರೂ.11.25 ಕೋಟಿ ವೆಚ್ಚದಲ್ಲಿ ನಿರ್ಮಿತ ನೂತನ ಪ್ರಾದೇಶಿಕ ಸಾರಿಗೆ ಕಛೇರಿಯನ್ನು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಎಂ. ಕೃಷ್ಣಪ್ಪ, ಶಾಸಕರು, ಬೆಂಗಳೂರು ದಕ್ಷಿಣ ಉಪಸ್ಥಿತರಿದ್ದರು.

ಸಾರಿಗೆ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಚಿವರು ಮಾಹಿತಿ ನೀಡುತ್ತಾ, ಪ್ರಸ್ತುತ 7 ಸ್ವಂತ RTO ಕಟ್ಟಡಗಳು ರೂ.45.74 ಕೋಟಿಗಳ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇನ್ನೂ 8 ಕಟ್ಟಡಗಳ ಕಾಮಗಾರಿಗಳು ರೂ.70 ಕೋಟಿಗಳ ವೆಚ್ಚದಲ್ಲಿ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಮಧುಗಿರಿ ಮತ್ತು ಹೊನ್ನಾವರ RTO ಕಟ್ಟಡಗಳು ರೂ.10.05 ಕೋಟಿಗಳ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಶೀಘ್ರದಲ್ಲೇ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ.

ಡ್ರೈವಿಂಗ್ ಟ್ರ್ಯಾಕ್‌ಗಳ ಅಭಿವೃದ್ಧಿ:

  • 9 ಡ್ರೈವಿಂಗ್ ಟ್ರ್ಯಾಕ್‌ಗಳು ರೂ.44.21 ಕೋಟಿಗಳಲ್ಲಿ ಪೂರ್ಣಗೊಂಡಿವೆ.
  • 28 ಡ್ರೈವಿಂಗ್ ಟ್ರ್ಯಾಕ್ ಕಾಮಗಾರಿಗಳು ರೂ.203 ಕೋಟಿಗಳಲ್ಲಿ ಪ್ರಗತಿಯಲ್ಲಿವೆ.
  • ಹೊನ್ನಾವರ, ಚಾಮರಾಜನಗರ ಹಾಗೂ ಚಿತ್ರದುರ್ಗದಲ್ಲಿ ರೂ.21 ಕೋಟಿಗಳ ವೆಚ್ಚದಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳು:
ರಾಜ್ಯದಲ್ಲಿ ಜಿಲ್ಲೆಗೆ ಒಂದರಂತೆ ಒಟ್ಟು 32 ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರಗಳನ್ನು ಪಿ.ಪಿ.ಪಿ. ಅಡಿ ಸ್ಥಾಪಿಸಲು ಉದ್ದೇಶಿಸಲಾಗಿದೆ.

ಭಾರಿ ವಾಹನ ಚಾಲಕರ ತರಬೇತಿ ಕೇಂದ್ರಗಳು:
ಗುಣಮಟ್ಟದ ಚಾಲಕರನ್ನು ತರಬೇತಿಗೊಳಿಸುವ ನಿಟ್ಟಿನಲ್ಲಿ 4 ಭಾರಿ ವಾಹನ ಚಾಲಕರ ತರಬೇತಿ ಕೇಂದ್ರಗಳನ್ನು ರೂ.60.76 ಕೋಟಿಗಳಲ್ಲಿ ಸ್ಥಾಪಿಸಲಾಗಿದೆ.
ಇನ್ನೊಂದು ಕೇಂದ್ರದ ಕಾಮಗಾರಿ ರೂ.6.50 ಕೋಟಿಗಳಲ್ಲಿ ನಡೆಯುತ್ತಿದ್ದು, ವಿಜಯಪುರ, ಬಳ್ಳಾರಿ ಹಾಗೂ ನಾಗಮಂಗಲದಲ್ಲಿ ಹೊಸ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

👉 ಈ ಮೂಲಕ ರಾಜ್ಯದಲ್ಲಿ ಸಾರಿಗೆ ಇಲಾಖೆಯ ಸೌಲಭ್ಯಗಳು ಮತ್ತಷ್ಟು ಆಧುನಿಕವಾಗುತ್ತಿವೆ ಎಂದು ಸಚಿವರು ತಿಳಿಸಿದರು.


Voice of Karnataka is a premier Kannada news portal dedicated to delivering timely and relevant news to our readers. Under the leadership of News Editor Irfan Uppinangady, we focus on providing in-depth coverage and diverse perspectives on local, national, and global issues. Committed to integrity and excellence in journalism, we strive to be the voice of the community, keeping our audience informed and engaged.

Post Comment

You May Have Missed